
ಸಕಲೇಶಪುರ : ತಾಲೂಕಿನ ಎ.ಆರ್.ಟಿ.ಓ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ಸಿಮೆಂಟ್ ಮಂಜು ರವರು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಇಂದು ಮನವಿ ಮಾಡಿದ್ದಾರೆ.
ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎ.ಆರ್.ಟಿ.ಓ ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಕಚೇರಿಯ ಕಾರ್ಯಚಟುವಟಿಕೆಗಳನ್ನು ನೆಡೆಸುವುದು ಕಷ್ಟವಾಗುತ್ತಿದೆ.
ಪ್ರಥಮ ದರ್ಜೆ ಸಹಾಯಕರ ಹುದ್ದೆ 2, ದ್ವಿತೀಯ ದರ್ಜೆ ಸಹಾಯಕರ ಹುದ್ದೆ 3, ಕ್ಲರ್ಕ್ 2, ವಾಹನ ಚಾಲಕ ಹುದ್ದೆ 1 ಖಾಲಿ ಖಾಲಿ ಇದ್ದು. ಇದರಿಂದಾಗಿ ಎ.ಆರ್ .ಟಿ.ಓ ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಕಚೇರಿಯ ಕಾರ್ಯಚಟುವಟಿಕೆಗಳನ್ನು ನೆಡೆಸುವುದು ಕಷ್ಟವಾಗುತ್ತಿದೆ.