ರಾಜ್ಯದ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೊಂದು ದಾಳಿ ನಡೆದಿದೆ. ದಾಳಿ ವೇಳೆ ಕೈದಿಗಳ ಬಳಿ ಇದ್ದ 30 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಚಾರ್ಜರ್ ಹಾಗೂ ಇನ್ನಿತರ ವಸ್ತುಗಳು ಕೂಡ ಪತ್ತೆಯಾಗಿವೆ. ಶಂಕಿತ ಭಯೋತ್ಪಾದಕರು ಸೇರಿದಂತೆ ಹಲವು ಕುಖ್ಯಾತ ಕ್ರಿಮಿನಲ್ಗಳು ಇಲ್ಲಿ ಬಂಧಿಯಾಗಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ಸೂಚನೆ ಮೇರೆಗೆ ದಾಳಿ ನಡೆದಿದೆ. ಕೋಲೆ ಆರೋಪಿ ದರ್ಶನ್ ಕೂಡ ಇದೇ ಜೈಲಿನಲ್ಲಿ ಇದ್ದಾರೆ. ಕಟ್ಟುನಿಟ್ಟಿನ ಕ್ರಮಕ್ಕೆ ಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.




