ಸುದ್ದಿ ಬಿಡುಗಡೆ ಜಾಹಿರಾತು ಪ್ರತಿನಿಧಿ ನವೀನ್ ಕಿಶೋರ್ ಹೃದಯಾಘಾತ

Share with

ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕೆಯ ಜಾಹಿರಾತು ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕುದ್ದುಪದವು ನಿವಾಸಿ ನವೀನ್ ಕಿಶೋರ್ ಜ.30ರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು.

ನವೀನ್‌ ಕಿಶೋ‌ರ್ ಅವರು ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆ ಮತ್ತು ಯುಟ್ಯೂಬ್ ಚಾನೆಲ್ ಗೆ ಜಾಹೀರಾತು ಪ್ರತಿನಿಧಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಜ.29ರ ಸಂಜೆ ಮನೆಗೆ ತೆರಳಿದ್ದು ರಾತ್ರಿ ಶೌಚಾಲಯಕ್ಕೆ ಹೋದವರು ಅಲ್ಲಿ ಹೃದಯಾಘಾತಕ್ಕೀಡಾಗಿದ್ದಾರೆ. ತಡರಾತ್ರಿ 2 ಗಂಟೆ ಸುಮಾರಿಗೆ ಅವರ ಸಹೋದರ ಎಚ್ಚರಗೊಂಡಾಗ ನವೀನ್ ಕಿಶೋ‌ರ್ ಅವರು ಶೌಚಾಲಯದಲ್ಲಿ ಕುಸಿದು ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮನೆ ಮಂದಿ ಮತ್ತು ಸ್ಥಳೀಯರು ಸೇರಿ ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ನವೀನ್ ಕಿಶೋ‌ರ್ ಆಗಲೇ ಮೃತಪಟ್ಟಿದ್ದರು. ಮೃತರು ತಾಯಿ ಪದ್ಮನಿ, ಸಹೋದರ ಮತ್ತು ಸಹೋದರಿಯರನ್ನು ಅಗಲಿದ್ದಾರೆ.


Share with

Leave a Reply

Your email address will not be published. Required fields are marked *