ದ್ವೇಷ ಭಾಷಣದ ವಿರುದ್ಧ ಯಾವುದೇ ದೂರು ನೀಡದಿದ್ದರೂ ಸ್ವಯಂ ಪ್ರಕರಣ ದಾಖಲಿಸಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ

Share with

ಯಾವುದೇ ದ್ವೇಷ ಭಾಷಣ ಮಾಡಿದ್ದಲ್ಲಿ ಯಾವುದೇ ದೂರುಗಳಿಲ್ಲದೆ ಎಫ್‌ಐಆರ್ ದಾಖಲಿಸಲು ಸ್ವಯಂಪ್ರೇರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ಸಂವಿಧಾನದ ಪೀಠಿಕೆಯಲ್ಲಿ ಸೂಚಿಸಿರುವ ಭಾರತದ ಜಾತ್ಯತೀತ ಗುಣಲಕ್ಷಣವನ್ನು ಸಂರಕ್ಷಿಸಲು ದ್ವೇಷ ಭಾಷಣ ಮಾಡಿದ ವ್ಯಕ್ತಿಗಳ ಧರ್ಮವನ್ನು ಲೆಕ್ಕಿಸದೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ದ್ವೇಷ ಭಾಷಣ ಪ್ರಕರಣಗಳನ್ನು ದಾಖಲಿಸುವಲ್ಲಿನ ವಿಳಂಬವನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ.

ದ್ವೇಷ ಭಾಷಣವನ್ನು ಗಂಭೀರ ಅಪರಾಧವೆಂದು ಕರೆದಿದೆ, ಇದು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯವನ್ನು ಹೊಂದಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ.


Share with

Leave a Reply

Your email address will not be published. Required fields are marked *