ಸುರತ್ಕಲ್: ಬೈಕಂಪಾಡಿಯ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನ ಮೃತದೇಹ ಎಪಿಎಂಸಿ ಬಳಿ ಅನುಮಾನಸ್ಪಾದವಾಗಿ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಓಡಿಸಾ ರಾಜ್ಯದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ
ಮೃತದೇಹದ ಬಲಕಾಲಿನ ಮಂಡಿಯ ಕೆಳಭಾಗದಲ್ಲಿ ಲಘುವಾಹನ ಗುದ್ದಿದ ಗುರುತುಗಳಿದ್ದು, ಅಪಘಾತಕ್ಕೀಡಾಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪಣಂಬೂರು ಮತ್ತು ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.