ಸುರತ್ಕಲ್ : ದ್ವಿ-ಚಕ್ರ ವಾಹನಕ್ಕೆ ಲಾರಿ ಢಿಕ್ಕಿ: ವಿದ್ಯಾರ್ಥಿನಿ ಸಾವು

Share with

ಸುರತ್ಕಲ್: ಲಾರಿಯೊಂದು ದ್ವಿ-ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಬುಧವಾರದಂದು ಸಂಭವಿಸಿದೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ಮುಕ್ಕ ನಿವಾಸಿ ಯಶವಂತ ಎಂಬವರ ಪುತ್ರಿ, ಎನ್‌ಐಟಿಕೆಯಲ್ಲಿ ಕಲಿಯುತ್ತಿದ್ದ ಮಾನ್ವಿ ಎಂದು ಗುರುತಿಸಲಾಗಿದೆ.

ತಂದೆ ಮತ್ತು ಮಗಳು ಸ್ಕೂಟಿಯಲ್ಲಿ ಮುಕ್ಕದ ಮನೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *