ಪ್ರತಿಭಾವಂತ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣು

Share with

ಕಬಡ್ಡಿ ಆಟಗಾರ

ಬೆಳ್ತಂಗಡಿ: ಪ್ರತಿಭಾವಂತ ಕಬಡ್ಡಿ ಆಟಗಾರ ಬೆಳ್ತಂಗಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31ರಂದು ಬೆಳಿಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕಿನ, ಪುದುವೆಟ್ಟು ಗ್ರಾಮದ ಕುಬಲ ನಿವಾಸಿ ಸ್ವರಾಜ್ (24) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಯುವಕ.

ಇವರು ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇವರ ಹಳೆಮನೆ ಇರುವ ಪುದುವೆಟ್ಟುಗೆ ಅವರು ಹೋಗಿದ್ದರು. ಅಲ್ಲಿ ಸ್ನಾನ ಮಾಡುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಜಿರೆಯ ಸಮೀಪ ಖಾಸಗಿ ಕಂಪನಿಯೊಂದರಲ್ಲಿ ಅವರು ಉದ್ಯೋಗವನ್ನು ನಿರ್ವಹಿಸುತ್ತಿದ್ದರು. ತಂದೆ ಸತೀಶ್ ಮತ್ತು ತಾಯಿ, ಸಹೋದರಿ ಸ್ವಾತಿ, ಕುಟುಂಬ ವರ್ಗವನ್ನು ಅಗಲಿದ್ದಾರೆ. ಸಾವಿಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.


Share with

Leave a Reply

Your email address will not be published. Required fields are marked *