ಅಕ್ಷಯ ಕಾಲೇಜಿನಲ್ಲಿ ಅಧ್ಯಾಪಕರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ” ಕಾರ್ಯಗಾರ

Share with

ಪುತ್ತೂರು:ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟಭರವಸೆ ಕೋಶ ಹಾಗೂ ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಇವರಸಹಭಾಗಿತ್ವದಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಒಂದು ದಿನದ” ಅಧ್ಯಾಪಕರ ತರಬೇತಿ ಕಾರ್ಯಗಾರ” ಕಾಲೇಜಿನ ಸಭಾಂಗಣದಲ್ಲಿನಡೆಯಿತು.

ಕಾರ್ಯಗಾರವನ್ನು ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ, ಅಧ್ಯಾಪಕರ ವ್ಯಕ್ತಿತ್ವವಿಕಸನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು ಕಳೆದ ಮೂರು ವರ್ಷಗಳಿಂದ ಸತತವಾಗಿ ಇಂತಹ ಕಾರ್ಯಗಾರವನ್ನು ನಡೆಸುತ್ತಾ ಬಂದಿರುತ್ತದೆ ಹಾಗೂ ಇದರ ಸದುಪಯೋಗವನ್ನು ಪ್ರತಿಯೊಬ್ಬ ಸಿಬ್ಬಂದಿಯು ಪಡೆದುಕೊಳ್ಳಬೇಕು ಎಂದು ಹಾರೈಸಿದರು. 

ಈ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮಾಸ್ಟರ್ಮೈಂಡ್ ಎಂಟರ್ಪ್ರೈಸಸ್ ಇದರ ಮಾಲಕರಾದ ಶ್ರೀ ಶ್ರೀಶ ಕೆ ಎಂ, ಒಂದು ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಉದ್ಯೋಗಿಯ ಸಹಕಾರ ಬಹಳ ಪ್ರಾಮುಖ್ಯತೆ ಪಡೆದಿರುತ್ತದೆ ಹಾಗೂ ಉದ್ಯೋಗಿಯು ತನ್ನಲ್ಲಿ ಅಳವಡಿಸಿಕೊಳ್ಳಬೇಕಾದ ಶ್ರದ್ದೆ, ಸಮಯಪಾಲನೆ, ನಡವಳಿಕೆ, ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ರೀತಿ, ವೃತ್ತಿಯಲ್ಲಿ ಚಾಣಾಕ್ಷತನ ಹೀಗೆ ಒಬ್ಬ ಉತ್ತಮ ಶಿಕ್ಷಕ ಎನಿಸಿಕೊಳ್ಳಲು ಶಿಕ್ಷಕನಲ್ಲಿ ಇರಬೇಕಾದ ಅರ್ಹತೆಗಳನ್ನು, ಚಟುವಟಿಕೆಯ ಮೂಲಕ ನಡೆಸಿದರು. 

ಕಾಲೇಜಿನ ಸುಮಾರು 45 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗದವರು ಈ ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು. 

ವೇದಿಕೆಯಲ್ಲಿ ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಇದರ ಪಾಲುದಾರರಾದ ಶ್ರೀ ವನಮಾಲಿ ಹೆಬ್ಬಾರ್, ಕಾಲೇಜಿನ ಆಡಳಿತಾಧಿಕಾರಿ ಶ್ರೀ ಅರ್ಪಿತ್ ಟಿ ಎ, ಉಪ ಪ್ರಾಂಶುಪಾಲರಾದ ಶ್ರೀ ರಕ್ಷಣಾ ಟಿ ಆರ್ ಉಪಸ್ಥಿತರಿದ್ದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ. ಪಕ್ಕಳ ಸ್ವಾಗತಿಸಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕುಮಾರಿ ಗಂಗರತ್ನ ವಂದಿಸಿದರು. ಗ್ರಂಥಪಾಲಕಿ ಶ್ರೀಮತಿ ಪ್ರಭಾವತಿ ಪ್ರಾರ್ಥಿಸಿದರು. ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ಹಾಗೂ ಐಕ್ಯೂಎಸಿ ಸಂಯೋಜಕಿಯಾದ ಶ್ರೀಮತಿ ರಶ್ಮಿ ಕೆ ಕಾರ್ಯಕ್ರಮ ನಿರೂಪಿಸಿದರು.


Share with