ಮಂಗಳವಾರ ಮುಂಜಾನೆ ಭಾರೀ ಮಳೆಯ ನಂತರ ಕೇರಳದ ವಯನಾಡ್ ಜಿಲ್ಲೆಯ ಹಲವು ಸ್ಥಳಗಳಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಇದುವರೆಗೆ 143ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 128ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ನೂರಾರು ಜನರು ಅವಶೇಷಗಳಡಿಯಲ್ಲಿ ಹೂತು ಹೋಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಭೂಕುಸಿತದಿಂದಾಗಿ ಹಲವು ಮನೆಗಳು ನೆಲಸಮವಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಹವಾಮಾನ ವೈಪರೀತ್ಯದ ನಡುವೆಯೂ ಸೇನೆ, ನೌಕಾಪಡೆ & NDRF ಪರಿಹಾರ ಕಾರ್ಯದಲ್ಲಿ ನಿರತವಾಗಿವೆ.