
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಕೀಯಾ ಶೋರೂಂ ಮುಂಭಾಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಹೋಗಿ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.
ಕಾರಿನಲ್ಲಿ ಮಹಿಳೆಯರೂ ಸೇರಿ ಐವರು ಪ್ರಯಾಣಿಸುತ್ತಿದ್ದರು. ಅಪಘಾತದಿಂದ ಗಾಯಗೊಂಡಿದ್ದರು. ಡಿವೈಡರ್ ಮೇಲೇರಿದ ಕಾರು ಕ್ರಾಶ್ ಗಾರ್ಡ್ ಗೆ ಢಿಕ್ಕಿ ಹೊಡೆದು ನಿಂತಿದ್ದು, ಕಾರು ಜಖಂ ಹೊಂದಿದೆ. ಕಾಪು ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾರು ಮಣಿಪಾಲದಿಂದ ಪಡುಬಿದ್ರೆಯತ್ತ ತೆರಳುತ್ತಿತ್ತು. ಗಾಯಗೊಂಡ ಪ್ರಯಾಣಿಕರ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ತನ್ನ ವಾಹನದಲ್ಲಿ ಪಡುಬಿದ್ರೆ ಆಸ್ಪತ್ರೆಯತ್ತ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.