ಚಿಕ್ಕಬಳ್ಳಾಪುರದಲ್ಲಿ ಭೀಕರ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಅಳಿಯನೊಬ್ಬ ಚಾಕುವಿನಿಂದ ಇರಿದು ಅತ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕವಿತಮ್ಮ( 43) ಕೊಲೆಯಾದ ಮಹಿಳೆ. ಕೌಟುಂಬಿಕ ಕಲಹದ ಹಿನ್ನೆಲೆ ಗಲಾಟೆ ನಡೆದು ಮಹಿಳೆಯ ಗಂಟಲಿಗೆ ಚಾಕು ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಹತ್ಯೆ ನಡೆಸಿದ ಬಳಿಕ ಆರೋಪಿ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮಾಹಿತಿ ನಿರೀಕ್ಷಿಸಿದೆ.