ಉಪ್ಪುಂದ: ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಮುಖಮಂಟಪದ ಎದುರು ಮಲಗಿದ್ದ ದನವನ್ನು ಜು. 2ರಂದು ಮುಂಜಾನೆ ಕಳ್ಳರು ಕದ್ದೊಯ್ದಿದ್ದಾರೆ. ಈ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ.
ಬೆಳಗಿನ ಜಾವ ಕಾರಿನಲ್ಲಿ ಬಂದ ಮೂವರು ದುರುಳರು ಮಾಂಸ ಮಾಡುವ ಉದ್ದೇಶದಿಂದ ಹೊಂಚುಹಾಕಿ, ಮಲಗಿದ್ದ ದನವನ್ನು ಹಿಡಿದು ಕಾರಿನಲ್ಲಿ ಹಿಂಸಾತ್ಮಕವಾಗಿ ತುರುಕಿಕೊಂಡು ಹೋಗಿರುವುದು ಕಂಡುಬಂದಿದೆ ಎಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.