ಮಲಗಿದ್ದ ದನವನ್ನು ಕಾರಿನಲ್ಲಿ ತುರುಕಿ ಸಾಗಿಸಿದ ಕಳ್ಳರು

Share with

ಉಪ್ಪುಂದ: ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಮುಖಮಂಟಪದ ಎದುರು ಮಲಗಿದ್ದ ದನವನ್ನು ಜು. 2ರಂದು ಮುಂಜಾನೆ ಕಳ್ಳರು ಕದ್ದೊಯ್ದಿದ್ದಾರೆ. ಈ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ.

ಬೆಳಗಿನ ಜಾವ ಕಾರಿನಲ್ಲಿ ಬಂದ ಮೂವರು ದುರುಳರು ಮಾಂಸ ಮಾಡುವ ಉದ್ದೇಶದಿಂದ ಹೊಂಚುಹಾಕಿ, ಮಲಗಿದ್ದ ದನವನ್ನು ಹಿಡಿದು ಕಾರಿನಲ್ಲಿ ಹಿಂಸಾತ್ಮಕವಾಗಿ ತುರುಕಿಕೊಂಡು ಹೋಗಿರುವುದು ಕಂಡುಬಂದಿದೆ ಎಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *