
ಮಂಗಳೂರು: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ಮಂಗಳೂರಿನ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ಮಾ.17 ರ ಸಂಜೆ ನಡೆದಿದೆ.
ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು ನಿವಾಸಿ ಅಫ್ರತ್ (18) ಗಾಯಾಳುಗಳು ಎಂದು ತಿಳಿದು ಬಂದಿದೆ.
ನಿನ್ನೆ ಸಂಜೆ 4.30 ಕ್ಕೆ ಕಾಲೇಜು ಮುಗಿಸಿ ಮನೆಗೆ ತೆರಳಲು ಹಂಪನಕಟ್ಟೆಯ ಬಳಿ ಬಸ್ಸಿಗೆ ಕಾಯುತ್ತಿದ್ದಾಗ ಮರದ ಕೊಂಬೆ ಬಿದ್ದಿದೆ.
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಲ್ಲಿ ಇನ್ನೂ ಕೆಲವರಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.