ತಿರುವನಂತಪುರಂ: ಉತ್ತರ ಕೇರಳದಲ್ಲಿ ಭಾರೀ ಪ್ರಮಾಣದ ಅತಿ ತೀವ್ರ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಆ.6ರಂದು ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇoದು ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಆಗಿದ್ದು ಭಾರೀ ಮಳೆ ಬರುತ್ತಿದೆ. ನಾಳೆ ಮಲಪ್ಪುರಂ, ಕೋಜಿಕ್ಕೋಡ್, ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಆಗಿದೆ.
ಮಳೆಯ ಜತೆ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ, ಸಿಡಿಲು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




