ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ; ಚಾಲಕನಿಗೆ ತರಾಟೆ

Share with

ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.
ಸ್ವಿಫ್ಟ್ ಡಿಝರ್ ಕಾರಿನ ಡಿಕ್ಕಿಯಲ್ಲಿ ಮೃತದೇಹ ಸಾಗಿಸಲಾಗುತ್ತಿದ್ದು, ಶಿರೂರು ಟೋಲ್ ಗೇಟ್ ಬಳಿ ಪತ್ತೆಯಾಗಿದೆ. ಮೊದಲು ಇದನ್ನು ಗಮನಿಸಿದ ಆಂಬುಲೆನ್ಸ್‌ ಡ್ರೈವರ್ ಒಬ್ಬರು ಈ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಮೃತದೇಹ ಕೊಂಡೊಯ್ಯುತ್ತಿದ್ದ ಚಾಲಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ವಿಚಾರಿಸಿದ್ದಕ್ಕೆ ಕಾರ್‌ನಲ್ಲಿದ್ದ ಮೃತದೇಹದ ವಾರಸುದಾರರು, ಆಂಬ್ಯುಲೆನ್ಸ್‌ನಲ್ಲಿ ಜಾಸ್ತಿ ಹಣ ಕೇಳಿದ್ದಕ್ಕಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಮೃತದೇಹವನ್ನು ಉಡುಪಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಡೆಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಎರಡು ದಿನಗಳ ಹಿಂದೆ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.


Share with

Leave a Reply

Your email address will not be published. Required fields are marked *