ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ’

Share with

ಬೆಳ್ತಂಗಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ತುಳುನಾಡ ತುಡರ ಪರ್ಬ” ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನ.12ರಂದು ನಡೆಯಿತು.

ಘಟಕದ ಗೌರವ ಸಲಹೆಗಾರ ರಮಾನಂದ ಸಾಲಿಯಾನ್ ಕಾರ್ಯಕ್ರಮ ಉದ್ಘಾಟಿಸಿದರು.

ಘಟಕದ ಅಧ್ಯಕ್ಷ ಅಶ್ವತ್ಥ್ ಕುಮಾರ್ ಮಾತನಾಡಿ, ‘ದೀಪಾವಳಿ ಪ್ರತಿ ಮನೆಯಲ್ಲೂ ಸಂಭ್ರಮ ಸಂತೋಷವನ್ನು ನೀಡುವ ಹಬ್ಬ. ಪಾರಂಪರಿಕ ಆಚರಣೆಯ ಜೊತೆಗೆ ನಮ್ಮೊಳಗಿನ ಅಜ್ಞಾನ ದೂರವಾಗಿ ಸುಜ್ಞಾನ ಬೆಳಗುವ ಹಬ್ಬವಾಗಲಿ’ ಎಂದು ಶುಭ ಹಾರೈಸಿದರು.

ಘಟಕದ ಗೌರವ ಸಲಹೆಗಾರ ರಮಾನಂದ ಸಾಲಿಯಾನ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಘಟಕದ ಸಲಹೆಗಾರ ವಿಠಲ್ ಸಿ ಪೂಜಾರಿ, ಉಪಾಧ್ಯಕ್ಷ ಸದಾಶಿವ ಊರ, ಕಾರ್ಯದರ್ಶಿ ಹರೀಶ್ ಕನ್ಯಾಡಿ, ಕೋಶಾಧಿಕಾರಿ ವಿಜಯ ಶಿರ್ಲಾಲು, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಹರೀಶ್ ಕನ್ಯಾಡಿ, ಕೊಲ್ಲಿ ಶ್ರೀ ದುರ್ಗಾ ದೇವಿ ಭಜನಾ ಮಂಡಳಿ ಮೇಲ್ವಿಚಾರಕಿ ಪ್ರಮೀಳಾ ಉಮೇಶ್ ಇದ್ದರು.

ಶ್ರೀ ದುರ್ಗಾ ದೇವಿ ಭಜನಾ ಮಂಡಳಿ ಕೊಲ್ಲಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಅನೀಸ್ ಅಮೀನ್ ವೇಣೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


Share with

Leave a Reply

Your email address will not be published. Required fields are marked *