
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೆ ಇಬ್ಬರು ಬಲಿಯಾಗಿದ್ದು, ವಿಷ ಸೇವಿಸಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಅರಕಲಗೂಡಿನ ಕೇಶವಯ್ಯ (61) ಕೊಪ್ಪಳದ ಯಂಕಪ್ಪ ಬಂಗಿ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಶವಯ್ಯ ಮನೆ ಕಟ್ಟಲು ಫೈನಾನ್ಸ್ನಲ್ಲಿ ಸಾಲ ಮಾಡಿಕೊಂಡಿದ್ದರು.
ಕೊಪ್ಪಳದ ನ್ಯಾಯಬೆಲೆ ಅಂಗಡಿಯ ಪಡಿತರ ವಿತರಕ ಯಂಕಪ್ಪ ಬಂಗಿ ಸರ್ಕಾರಿ ಬ್ಯಾಂಕ್ ಮತ್ತು ಖಾಸಗಿ ಫೈನಾನ್ಸ್ನಲ್ಲಿ ಸಾಲ ಮಾಡಿಕೊಂಡಿದ್ದರು.