ಉಡುಪಿ: ದೂರದರ್ಶನದ ಉಡುಪಿ ವರದಿಗಾರರಾದ ಜಯಕರ ಸುವರ್ಣ ನಿಧನ

Share with

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಾಗೂ ದೂರದರ್ಶನದ ಉಡುಪಿ ವರದಿಗಾರರಾದ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಅವರು ಆ.5ರಂದು ಹೃದಯಾಘಾತದಿಂದ ನಿಧನ ಹೊಂದಿದರು.

ಸೌತ್‌ ಕೆನರಾ ಫೋಟೋಗ್ರಾಫ‌ರ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರೂ ಆಗಿದ್ದ ಇವರು ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು. ಇವರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕಲ್ಮಾಡಿ ಮನೆಯಲ್ಲಿ ಇವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ನಡೆಯಲಿದ್ದು, ಇಂದೇ ಅಂತ್ಯಕ್ರಿಯೆ ನಡೆಯಲಿದೆ.


Share with

Leave a Reply

Your email address will not be published. Required fields are marked *