ಉಡುಪಿ: ಮೀನುಗಾರಿಕಾ ಬೋಟ್ ಮುಳುಗಡೆ; 8 ಮಂದಿ ಮೀನುಗಾರರ ರಕ್ಷಣೆ

Share with

ಉಡುಪಿ: ಮೀನುಗಾರಿಕೆಗೆಂದು ಆಳಸಮುದ್ರಕ್ಕೆ ತೆರಳಿದ ಬೋಟು ಮುಳುಗಡೆಗೊಂಡು ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿದ ಘಟನೆ ನಡೆದಿದೆ.

ಮೀನುಗಾರಿಕಾ ಬೋಟ್ ಮುಳುಗಡೆ

ಕಡೆಕಾರು ರಕ್ಷಾ ಅವರಿಗೆ ಸೇರಿದ ಶ್ರೀ ನಾರಾಯಣ-ಬೋಟು ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಡಿ.19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್‌ನ ತಳ ಒಡೆದು ನೀರು ನುಗ್ಗಲಾರಂಭಿಸಿದ್ದು, ತಕ್ಷಣ ವಯರ್‌ಲೆಸ್‌ ಮೂಲಕ ಇತರ ಬೋಟ್‌ಗಳಿಗೆ ಸಂದೇಶ ನೀಡಿದರು. ಈ ವೇಳೆ ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಶ್ರೀ ಮೂಕಾಂಬಿಕಾ ಅನುಗ್ರಹ ಬೋಟಿನವನರು ಧಾವಿಸಿ ಬಂದು ಮುಳುಗುತ್ತಿರುವ ಬೋಟನ್ನು ಮೇಲೆಳೆಯಲು ಯತ್ನಿಸಿದರು.

ನೀರಿನ ಅಬ್ಬರ ಜಾಸ್ತಿಯಾಗಿದ್ದರಿಂದ ಪ್ರಯತ್ನ ಫ‌ಲ ನೀಡಲಿಲ್ಲ. ಸುಮಾರು 8 ಗಂಟೆ ವೇಳೆಗೆ ಬೋಟ್‌ ಪೂರ್ಣ ಮುಳುಗಡೆಗೊಂಡಿತು. ಅದರಲ್ಲಿದ್ದ ಮೀನುಗಾರರನ್ನು ಮೂಕಾಂಬಿಕಾ ಬೋಟಿನವರು ದಡಕ್ಕೆ ಸೇರಿಸಿದ್ದಾರೆ. ಸುಮಾರು 18 ಲ.ರೂ. ನಷ್ಟ ಅಂದಾಜಿಸಲಾಗಿದೆ.


Share with

Leave a Reply

Your email address will not be published. Required fields are marked *