
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಹೊರ ಜಿಲ್ಲೆ ಹೊರ ರಾಜ್ಯದಿಂದ ದಿನಂಪ್ರತಿ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಹೀಗೆ ಆಗಮಿಸುವ ಭಕ್ತರು ದೇವರಿಗೆ ಕೈ ಮುಗಿದು ದೇವಾಲಯದ ಎದುರು ಫೋಟೋ ಕ್ಲಿಕ್ಕಿಸಿ ಹೋಗೋದು ಸಾಮಾನ್ಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಪ್ರೀ ವೆಡ್ಡಿಂಗ್ ಶೂಟ್ ದೇವಾಲಯದ ಆವರಣಕ್ಕೂ ಕಾಲಿಟ್ಟಿರೋದ್ರಿಂದ ಮುಜುಗರದ ಸನ್ನಿವೇಶ ಎದುರಾಗಿದೆ. ಹೀಗಾಗಿ ಶ್ರೀಕೃಷ್ಣಮಠದ ಆಡಳಿತ ಒಂದು ಕಡಕ್ ನಿರ್ಧಾರ ಕೈಗೊಂಡಿದೆ.
ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕಗೋಪುರ, ಅಷ್ಟಮಠಗಳ ಎದುರು, ಪವಿತ್ರ ರಥದ ಬಳಿ ಹೀಗೆ ರಥಬೀದಿ ಸುತ್ತಲೂ ಬೆಳ್ಳಂಬೆಳಗ್ಗೆ ಮದುವೆಯಾಗುವ ಜೋಡಿಗಳು ಹಾಜರಾಗ್ತಾರೆ.
ಶ್ರೀಕೃಷ್ಣ ಮಠದ ಆಡಳಿತ ಮಂಡಳಿ ಇಂತಹದೊಂದು ಕಡಕ್ ನಿರ್ಧಾರಕ್ಕೆ ಬರಲು ಮುಖ್ಯ ಕಾರಣ ಮಠಾಧೀಶರೆದುರೇ ಜೋಡಿಗಳು ಫೊಟೋಶೂಟ್ಗಾಗಿ ಅಸಭ್ಯ ವರ್ತನೆಯಲ್ಲಿ ಮೈಮರೆತಿರೋದು. ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಯತಿಗಳೆದುರೇ ಅಸಭ್ಯ ವರ್ತನೆಗೆ ಯತಿಗಳು ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ