ಉಡುಪಿ: ದ್ವಿಚಕ್ರ ವಾಹನವೊಂದು ಸ್ಕಿಡ್ ಆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಶಾರದಾ ಹೋಟೆಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
![ದ್ವಿಚಕ್ರ ವಾಹನವೊಂದು ಸ್ಕಿಡ್ ಆದ ಘಟನೆ ನಡೆದಿದೆ.](https://i0.wp.com/veekshakavani.com/wp-content/uploads/2024/02/ದ್ವಿಚಕ್ರ-ವಾಹನ-ಸ್ಕಿಡ್.jpg?resize=640%2C400&ssl=1)
ಘಟನೆಯಲ್ಲಿ ಬೈಕ್ ಸವಾರ ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ (42) ಗಂಭೀರವಾಗಿ ಗಾಯಗೊಂಡಿದ್ದಾರೆ. ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
![ದ್ವಿಚಕ್ರ ವಾಹನವೊಂದು ಸ್ಕಿಡ್ ಆದ ಪರಿಣಾಮ ಸವಾರ ಗಂಭೀರ](https://i0.wp.com/veekshakavani.com/wp-content/uploads/2024/02/ಸವಾರ-ಗಂಭೀರ.jpg?resize=640%2C400&ssl=1)
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಗಾಯಾಳನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಸಂಚಾರಿ ಠಾಣೆಯ ಪೊಲೀಸ್ ವೀರಯ್ಯ ಕಾರ್ಯಾಚರಣೆಗೆ ಸಹಕರಿಸಿದರು.