ಉಡುಪಿ: ಮತಾಂತರ ಮಾಡಲು ಬಂದವರನ್ನು ಅಟ್ಟಾಡಿಸಿಕೊಂಡು ಓಡಿಸಿದ್ರು!

Share with

ಉಡುಪಿ: ಮತಾಂತರ ಮಾಡಲಾಗುತ್ತದೆ ಎಂಬ ಸುದ್ದಿ ಕರಾವಳಿಯಾದ್ಯಂತ ಆಗಾಗ ಸದ್ದು ಮಾಡುತ್ತಿರುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತ ವಿಡಿಯೋ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಉಪ್ಪಿನಕೋಟೆ ಬಳಿ ಈ ಘಟನೆ ಸಂಭವಿಸಿದೆ.

ತಮ್ಮ ಧರ್ಮದ ಪ್ರಚಾರಕ್ಕಾಗಿ ಇಬ್ಬರು ಮಹಿಳೆಯರು ಬ್ರಹ್ಮಾವರ ಸಮೀಪದ ಉಪ್ಪಿನಕೋಟೆಗೆ ಬಂದಿದ್ದರು.

ತಮ್ಮ ಧರ್ಮದ ಪ್ರಚಾರಕ್ಕಾಗಿ ಇಬ್ಬರು ಮಹಿಳೆಯರು ಬ್ರಹ್ಮಾವರ ಸಮೀಪದ ಉಪ್ಪಿನಕೋಟೆಗೆ ಬಂದಿದ್ದರು. ತಮ್ಮ ಧರ್ಮದ ಕುರಿತು ಸ್ಥಳೀಯರಿಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಕೋಪಗೊಂಡ ಸ್ಥಳೀಯನೊಬ್ಬ, ಮತಾಂತರ ಮಾಡಲು ಬಂದಿದ್ದೀರ ? ಎಂದು ಅಕ್ರೋಶ ವ್ಯಕ್ತಪಡಿಸಿ ಆವಾಜ್ ಹಾಕಿದ್ದಾರೆ. ಬಳಿಕ ದೊಣ್ಣೆ ಹಿಡಿದು ಅಟ್ಟಾಡಿಸಿಕೊಂಡು ಹೋಗಿದ್ದಾರೆ.

ಇನ್ನೊಮ್ಮೆ ಈ ಭಾಗಕ್ಕೆ ಬಂದರೆ ಜಾಗ್ರತೆ ಎಂದು ಗದರಿಸಿ ಅವರನ್ನು ಓಡಿಸಿದ್ದಾರೆ. ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಮತಾಂತರಕ್ಕೆ ಬಂದವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


Share with

Leave a Reply

Your email address will not be published. Required fields are marked *