ಉಡುಪಿ: ಹೊಳೆಯ ನೀರಿನಲ್ಲಿ ಮುಳುಗಿ ಯುವಕ ಸಾವು

Share with

ಉಡುಪಿ: ಬೈರಂಪಳ್ಳಿ ಗ್ರಾಮದ ಕೆ.ಸಿ ರೋಡ್‌ನ ಪಟ್ಟಿಬಾವು ಹೊಳೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಎಲೆಕ್ಟ್ರೀಷಿಯನ್ ಕೆಲಸ ಮಾಡುತಿದ್ದ ಅಜಯ್ (21) ಎಂದು ಗುರುತಿಸಲಾಗಿದೆ.

ಬೈರಂಪಳ್ಳಿ ಗ್ರಾಮದ ಕೆ.ಸಿ ರೋಡ್‌ನ ಪಟ್ಟಿಬಾವು ಹೊಳೆ

ಇವರು ವಾಲಿಬಾಲ್ ಆಡಲೆಂದು ಡಿ.24ರಂದು ಅಪರಾಹ್ನ ಕೆ.ಸಿ ರೋಡ್‌ಗೆ ತೆರಳಿದ್ದರು. ವಾಲಿಬಾಲ್ ಆಡಿದ ಬಳಿಕ 2:30ರ ಸುಮಾರಿಗೆ ಸ್ನೇಹಿತರೆಲ್ಲರೂ ಹೊಳೆಯ ದಂಡೆಯಲ್ಲಿ ಕುಳಿತಿದ್ದು, ಅಜಯ್ ತಾನು ಈಜಿಕೊಂಡು ನದಿಯ ಇನ್ನೊಂದು ದಡಕ್ಕೆ ಹೋಗುವುದಾಗಿ ಹೇಳಿ ಹೊಳೆಗೆ ಇಳಿದಿದ್ದು, ಮಧ್ಯದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ . ಬಳಿಕ ಸ್ಥಳೀಯರೊಬ್ಬರು 4 ಗಂಟೆ ಸುಮಾರಿಗೆ ಮೃತದೇಹವನ್ನು ಹೊರತೆಗಿದಿದ್ದಾರೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *