ಉಡುಪಿ: ಪಾಳುಬಿದ್ದ ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕ ಗಂಭೀರ

Share with

news-banner

ಉಡುಪಿ: ನಗರದ ಕಲ್ಸಂಕದಿಂದ ಶ್ರೀಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ ಸ್ಥಳವನ್ನು ಸಂಪರ್ಕಿಸುವ ರಸ್ತೆ ಬಳಿ ಪಾಳುಬಿದ್ದಿರುವ ಬಹುಮಹಡಿ ಕಟ್ಟಡದಿಂದ ಅಪರಿಚಿತ ವ್ಯಕ್ತಿಯೋರ್ವ ಸುಮಾರು 25 ಅಡಿ ಎತ್ತರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಅಪರಿಚಿತ ವ್ಯಕ್ತಿಯನ್ನು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.

ಘಟನೆಯನ್ನು ಗಮನಿಸಿದ ಕಲ್ಸಂಕ ಆಟೋ ಸ್ಟಾಂಡಿನ ಚಾಲಕರು, ಒಳಕಾಡುವರಿಗೆ ಮಾಹಿತಿ ನೀಡಿದ್ದರು. ಯುವಕನ ಕುತ್ತಿಗೆ, ಬೆನ್ನು ಮೂಳೆ ಮುರಿತಗೊಳಗಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. 

ರಕ್ಷಿಸಲ್ಪಟ್ಟ ಯುವಕನ ಹೆಸರು ಸೂರತ್ ಸಿಂಗ್ ರಾವತ್ (35) ಎಂದು ತಿಳಿದುಬಂದಿದೆ.


Share with

Leave a Reply

Your email address will not be published. Required fields are marked *