ಉಪ್ಪಳ: ಪ್ರತಾಪನಗರದಲ್ಲಿ ಉಚಿತ ಆಯುರ್ವೇದ ಶಿಬಿರ

Share with

ಉಪ್ಪಳ: ಶಿವಶಕ್ತಿ ಪ್ರೆಂಡ್ಸ್ ಕ್ಲಬ್ ಪ್ರತಾಪ ನಗರ ಸರಕಾರಿ ಆಯುರ್ವೇದ ಆಸ್ಪತ್ರೆ ಮಂಗಲ್ಪಾಡಿ ಇದರ ಜಂಟಿ ಆಶ್ರಯದಲ್ಲಿ ಉಚಿತ ಆಯುರ್ವೇದ ಶಿಬಿರ ಹಾಗೂ ಔಶಧಿ ವಿತರಣೆ ನ.30ರಂದು ಬೆಳಿಗ್ಗೆಯಿಂದ ಮಧ್ಯಾಹ್ನ ತನಕ ಪ್ರತಾಪ ನಗರ ಶಿವಶಕ್ತಿ ಪ್ರೆಂಡ್ಸ್ ಕ್ಲಬ್‌ನಲ್ಲಿ ನಡೆಯಿತು.

ಸರಕಾರಿ ಆಯುರ್ವೇದ ಆಸ್ಪತ್ರೆ ಮಂಗಲ್ಪಾಡಿ ಇದರ ಜಂಟಿ ಆಶ್ರಯದಲ್ಲಿ ಉಚಿತ ಆಯುರ್ವೇದ ಶಿಬಿರ ಹಾಗೂ ಔಶಧಿ ವಿತರಣೆ.

ಐಲ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಮೊಕ್ತೇಸರ ಶಿವರಾಮ ಪಕಳ ಉಪ್ಪಳ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ವಾರ್ಡ್ ಸದಸ್ಯೆ ಸುಧಾ ಗಣೇಶ್ ಅಧ್ಯಕ್ಷತೆ ವಹಿಸಿದರು. ಮಂಗಲ್ಪಾಡಿ ಸರಕಾರಿ ಆಯುರ್ವೇದ ವೈದ್ಯರಾದ ರಶ್ಮಿ ಮಾಹಿತಿ ನೀಡಿದರು. ಕ್ಲಬ್‌ನ ಅಧ್ಯಕ್ಷ ಗಣೇಶ್, ಆಸ್ಪತ್ರೆ ಸಿಬ್ಬಂದಿಗಳಾದ ಶ್ರುತಿ, ಉಷಾ ಹಾಗೂ ಕ್ಲಬ್‌ನ ಸದಸ್ಯರು, ನಾಗರಿಕರು ಭಾಗವಹಿಸಿದರು. ದಿವಾಕರ ಸ್ವಾಗತಿಸಿ, ಉದಯ ಶಂಕರ ಧನ್ಯವಾದ ನೀಡಿದರು.


Share with

Leave a Reply

Your email address will not be published. Required fields are marked *