ಉಪ್ಪಳ: ಕೇರಳ ಟೈಲರ್ಸ್ ಅಸೋಸಿಯೇಶನ್ [ಕೆ.ಎಸ್.ಟಿ.ಎ] ಮಂಜೇಶ್ವರ ತಾಲೂಕು ಸಮ್ಮೇಳನ ಜ.23ರಂದು ಪೆರ್ಲ ಪಡ್ರೆ ಸಭಾ ಭವನದಲ್ಲಿ ನಡೆಯಿತು.
ಮಂಜೇಶ್ವರ ತಾಲೂಕು ಅಧ್ಯಕ್ಷ ರಾಮ ಪೊಯ್ಯಕಂಡ ಅಧ್ಯಕ್ಷತೆ ವಹಿಸಿದ ಸಭೆಯಲ್ಲಿ ಮಾಜಿ ರಾಜ್ಯ ಅಧ್ಯಕ್ಷ ರಾಮನ್ ಚೆನ್ನಿಕರೆ ಉದ್ಘಾಟಿಸಿದರು. ರಾಜ್ಯ ಕಾರ್ಯದರ್ಶಿ ಪಿಯು ಶಂಕರನ್, ರಾಜ್ಯ ಸಮಿತಿ ಸದಸ್ಯ ಮೋಹನ್ದಾಸ್ ಕುಂಬಳೆ, ಜಿಲ್ಲಾಧ್ಯಕ್ಷ ಸುರೇಶ್ ಭಟ್, ಮಾಜಿ ರಾಜ್ಯ ಸಮಿತಿ ಸದಸ್ಯ ಬಾಲಕೃಷ್ಣ ಶೆಟ್ಟಿ ಕರಿಪ್ಪಾರ್, ಜಿಲ್ಲಾ ಸಮಿತಿ ಸದಸ್ಯರಾದ ಗಣೇಶ್ ಪಾವೂರು, ನಾರಾಯಣ ಕುಂಬಳೆ, ಚಂದ್ರನ್ ಪೆರ್ಲ, ತಲೂಕು ಉಪಾಧ್ಯಾಕ್ಷೆ ಲೇಖಾ.ಎಸ್ ಶುಭಾಂಶನೆಗೈದರು.
ತಾಲೂಕು ಕಾರ್ಯದರ್ಶಿ ದಯಾನಂದ.ಪಿ ಸ್ವಾಗತಿಸಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಸತೀಶ್ ಆಚಾರ್ಯ ವರದಿ ವಾಚಿಸಿದರು. ತಾಲೂಖು ಸಮಿತಿ ಕೋಶಾಧಿಕಾರಿ ವಿಜಯ ಶೆಟ್ಟಿ ಲೆಕ್ಕಪತ್ರ ಮಂಡಿಸಿದರು. ತಾಲೂಕು ಕಾರ್ಯದರ್ಶಿ ಸಂತೋಷ್ ಶೆಟ್ಟಿ ಧನ್ಯವಾದ ನೀಡಿದರು.