ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ K.C.ವೇಣುಗೋಪಾಲ್ ದೃಢಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಘಟಕವು ನಾಳೆ ಚೆನ್ನೈನಲ್ಲಿ ಸಭೆ ಸೇರಿ, ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ. 234 ಸ್ಥಾನಗಳಲ್ಲಿ ವಿಜಯ್ ಪಕ್ಷ 108 ಸ್ಥಾನಗಳನ್ನು ಗೆದ್ದುಕೊಂಡಿದೆ. ಅಧಿಕಾರ ಹಿಡಿಯಲು ಇನ್ನೂ 10 ಶಾಸಕರ ಬೆಂಬಲದ ಅಗತ್ಯವಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ಗೆ 5 ಸ್ಥಾನಗಳು ದೊರೆತಿವೆ.




