ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಮತ್ತೋರ್ವ ಹಿಂದೂಗೆ ಥಳಿಸಿ, ವಿಷ ಹಾಕಿ ಹತ್ಯೆ

Share with

ಢಾಕಾ, ಜನವರಿ 10: ನೆರೆಯ ದೇಶ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ ಮುಂದುವರೆದಿದೆ. ಬಾಂಗ್ಲಾದೇಶದಲ್ಲಿ (Bangladesh) ಮತ್ತೊಬ್ಬ ಹಿಂದೂ ಯುವಕನನ್ನು ಕೊಲ್ಲಲಾಗಿದೆ. ಹತ್ಯೆಯಾದ ಯುವಕನನ್ನು ಜಾಯ್ ಮಹಾಪಾತ್ರೋ ಎಂದು ಗುರುತಿಸಲಾಗಿದೆ. ಆತ ಸುನಮ್‌ಗಂಜ್ ಜಿಲ್ಲೆಯ ಭಂಗದೋಹೋರ್ ಗ್ರಾಮದ ನಿವಾಸಿಯಾಗಿದ್ದ. ಈ ಘಟನೆ ಗುರುವಾರ ನಡೆದಿದ್ದು, ಆತನನ್ನು ಸ್ಥಳೀಯ ಅಂಗಡಿಯೊಂದಕ್ಕೆ ಕರೆಸಲಾಯಿತು. ಅಲ್ಲಿ ಸ್ಥಳೀಯರು ಆತನ ಮೇಲೆ ಹಲ್ಲೆ ನಡೆಸಿದರು.

ಬಳಿಕ ಆತನನ್ನು ಸಿಲ್ಹೆಟ್ ಎಂಎಜಿ ಉಸ್ಮಾನಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಘೋಷಿಸಲಾಯಿತು. ಜಾಯ್‌ಗೆ ಅಮಿರುಲ್ ಇಸ್ಲಾಂ ಎಂಬ ವ್ಯಕ್ತಿ ವಿಷಪ್ರಾಶನ ಮಾಡಿಸಿದ್ದಾನೆ ಎಂದು ಆ ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಫೆಬ್ರವರಿ 12ರಂದು ನಡೆಯಲಿರುವ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿದ್ದ ತೀವ್ರಗಾಮಿ ಭಾರತ ವಿರೋಧಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಸಾಮಾನ್ಯವಾಗಿದೆ. ಮೊದಲನೆಯದಾಗಿ, ಮೈಮೆನ್ಸಿಂಗ್ ಜಿಲ್ಲೆಯಲ್ಲಿ 27 ವರ್ಷದ ಯುವಕ ದೀಪು ಚಂದ್ರ ದಾಸ್ ಅವರನ್ನು ಥಳಿಸಿ ಕೊಲ್ಲಲಾಯಿತು. ಡಿಸೆಂಬರ್ 24ರಂದು ರಾಜ್ಬರಿಯ ಅಮೃತ್ ಮೊಂಡಲ್ ಅವರನ್ನು ಗುಂಪೊಂದು ಹೊಡೆದು ಕೊಂದಿತು.

ನಂತರ, ಮೈಮೆನ್ಸಿಂಗ್‌ನಲ್ಲಿ 42 ವರ್ಷದ ಬಜೇಂದ್ರ ಬಿಸ್ವಾಸ್ ಎಂಬ ವ್ಯಕ್ತಿಯನ್ನು ಅವರ ಸಹೋದ್ಯೋಗಿ ಗುಂಡಿಕ್ಕಿ ಕೊಂದರು. ಬಳಿಕ ಶರಿಯತ್‌ಪುರ ಜಿಲ್ಲೆಯಲ್ಲಿ 50 ವರ್ಷದ ಖೋಕೋನ್ ದಾಸ್ ಅವರಿಗೆ ಬೆಂಕಿ ಹಚ್ಚಲಾಯಿತು. ಜನವರಿ 5ರಂದು ಜೆಸ್ಸೋರ್ ಜಿಲ್ಲೆಯಲ್ಲಿ ಪತ್ರಕರ್ತ ರಾಣಾ ಪ್ರತಾಪ್ ಬೈರಾಗಿ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಅದಾದ ಒಂದು ದಿನದ ನಂತರ, ನರಸಿಂಗ್ಡಿ ಜಿಲ್ಲೆಯಲ್ಲಿ ಶರತ್ ಮಣಿ ಚಕ್ರವರ್ತಿ ಎಂಬ 40 ವರ್ಷದ ವ್ಯಕ್ತಿಯನ್ನು ಕೊಲ್ಲಲಾಯಿತು.


Share with

Leave a Reply

Your email address will not be published. Required fields are marked *