ಮಂಗಲ್ಪಾಡಿ: ಪ್ರತಾಪನಗರ ಶ್ರೀ ಗಾಯತ್ರಿ ವಿಶ್ವಕರ್ಮ ಮಂದಿರದಲ್ಲಿ 46ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ವಿವಿಧ ಕಾರ್ಯಕ್ರಮಗಳೊಂದಿದೆ ಬಹಳ ಅದ್ದೂರಿಯಾಗಿ ನೆರವೇರಿತು. ಬೆಳಿಗ್ಗೆ ಮಂದಿರದ ಅಧ್ಯಕ್ಷ ಶಿವಾನಂದ ಆಚಾರ್ಯ ರವರು ದ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಆರಿಕ್ಕಾಡಿ ಕೆಳಗಿನ ಮನೆ ಪುರೋಹಿತ ರಾಮಕೃಷ್ಣ ಆಚಾರ್ಯರವರ ಪೌರೋಹಿತ್ಯದಲ್ಲಿ ಗಣಪತಿ ಹೋಮ, ವಿಶ್ವಕರ್ಮ ಹೋಮ ಮಹಾಪೂಜೆ, ಪ್ರಸಾದ ವಿತರಣೆ ನಡೇಯಿತು. ಅನ್ನಸಂತರ್ಪಣೆ, ಮಧ್ಯಾಹ್ನ ವಿಶ್ವನಿಕೇತನ ಶಿಶು ವಿದ್ಯಾಕೇಂದ್ರದ ಪುಟಾಣಿಗಳಿಂದ ಹಾಗೂ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕöÈತಿಕ ಕಾರ್ಯಕ್ರಮಗಳು, ಹಾಗೂ ವಿವಿಧ ಸ್ಪರ್ಧೆಗಳು ನಡೆಯಿತು. ಸೂರ್ಯಾಹಸ್ತಮಾನದಿಂದ ಮರುದಿನ ಸೂರ್ಯೋದಯದ ತನಕ ವಿವಿಧ ತಂಡಗಳಿAದ ಭಜನಾ ಕಾರ್ಯಕ್ರಮ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.