ವಿಟ್ಲ: ಕೊಡಾಜೆ ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ನಡೆದಿದೆ.
ಶನಿವಾರ ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಮಳೆಯ ಪರಿಣಾಮ ಶಬರಿ ರತ್ನಾಕರ ಎಂಬವರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅವರ ಕಾರಿನ ಮೇಲೆ ಮರ ಬಿದ್ದಿದೆ. ತಕ್ಷಣವೇ ಸ್ಥಳೀಯರು ಕಾರಿನ ಮೇಲೆ ಬಿದ್ದಿರುವ ಮರವನ್ನು ತೆರವುಗೊಳಿಸಿದರು.