![](https://i0.wp.com/veekshakavani.com/wp-content/uploads/2024/05/veekshakavani-news-template-3-5.jpg?resize=640%2C400&ssl=1)
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಅಳಿಕೆ ವಲಯದ ಕನ್ಯಾನ ಬಿ ಕಾರ್ಯಕ್ಷೇತ್ರದ ದೆಲಂತಬೆಟ್ಟು ರಂಜಿತ್ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್, ಕನ್ಯಾನ ಬಿ ಒಕ್ಕೂಟ ಉಪಾಧ್ಯಕ್ಷ ಚಂದ್ರ, ಅಳಿಕೆ ವಲಯ ಮೇಲ್ವಿಚಾರಕಿ ಮಾಲತಿ, ಪದಾಧಿಕಾರಿ ಶಂಕರ್, ಒಕ್ಕೂಟ ಸೇವಾ ಪ್ರತಿನಿಧಿ ಪೂರ್ಣಿಮಾ ಮೊದಲಾದವರು ಉಪಸ್ಥಿತರಿದ್ದರು.