ತೋಟಕ್ಕೆ ನುಗ್ಗಲು ಯತ್ನಿಸಿದ ಆನೆ; ಅರ‍ಣ್ಯ ಇಲಾಖೆಯ ಕಾರ್ಯಪ್ರಜ್ಞೆಯಿಂದ ಆನೆಯನ್ನು ಕಾಡಿಗಟ್ಟುವಲ್ಲಿ ಯಶ್ವಸಿ

Share with

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇರ್ತನೆ ಎಂಬಲ್ಲಿ ಸೆ.12 ರಂದು ರಾತ್ರಿ ಕಾಡಾನೆಗಳು ಕಂಡು ಬಂದಿದ್ದು ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಕಾಡಾನೆಗಳನ್ನು ಅಟ್ಟುವ ಕಾರ್ಯಾಚರಣೆ ನಡೆಸಿದ್ದು ಕೃಷಿ ಹಾನಿ ಉಂಟಾಗುವುದು ತಪ್ಪಿದೆ.


ಸ್ಥಳೀಯವಾಗಿ ರಾತ್ರಿ 11ರ ಸುಮಾರಿಗೆ ಕಾಡಾನೆಗಳು ತೋಟಕ್ಕೆ ನುಗ್ಗಿವುದು ಗಮನಕ್ಕೆ ಬಂದಿದೆ. ಕೂಡಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಯಿತು. ಡಿ ಆರ್ ಎಫ್ ಒ ಹರಿಪ್ರಸಾದ್,ರಾಜೇಶ್ ಗಸ್ತು ಅರಣ್ಯ ಪಾಲಕರಾದ ಸಂತೋಷ, ಸದಾನಂದ ಆಗಮಿಸಿ ಸ್ಥಳೀಯರ ಸಹಕಾರದಲ್ಲಿ ಆನೆಗಳನ್ನು ಕಾಡಿಗೆ ಅಟ್ಟಲಾಗಿದೆ. ಆನೆ ಗುಂಪಿನಲ್ಲಿ ಮರಿಯು ಇರುವ ಶಂಕೆ ವ್ಯಕ್ತವಾಗಿದೆ.


Share with

Leave a Reply

Your email address will not be published. Required fields are marked *