ಸ್ಕೂಟರ್ ನಿಂದ ಬಿದ್ದು ಮಹಿಳೆ ಮೃತ್ಯು

Share with

ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ (52) ಸ್ಕೂಟರ್ ನಿಂದ ಬಿದ್ದು ಮೃತ್ಯು.

ಉಳ್ಳಾಲ: ತೊಕ್ಕೊಟ್ಟು ಕೆರೆಬೈಲು‌ ಬಳಿ ಸ್ಕೂಟರ್ ನಿಂದ ಬಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ (52) ಮೃತಪಟ್ಟ ಮಹಿಳೆಯಾಗಿದ್ದು, ಕೋಟೆಕಾರು ಬೀರಿಯ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ‌ ತೊಕ್ಕೊಟ್ಟು ಪ್ಲೈಓವರ್ ಸಂಪರ್ಕಿಸುವ ಕೆರೆಬೈಲು ನಾಗನ ಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್ ನಿಂದ ಸುಮಾ ಉರುಳಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


Share with

Leave a Reply

Your email address will not be published. Required fields are marked *