ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರು ವರ್ಗಾವಣೆಯಾಗಿದ್ದು, ನೂತನ ಎಸ್ಪಿಯಾಗಿ ಯತೀಶ್ ಎನ್ ನೇಮಕವಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರವು 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ತಡರಾತ್ರಿ ಆದೇಶವನ್ನು ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿಬಿ ರಿಷ್ಯಂತ್ ಅವರು ಬೆಂಗಳೂರು ವೈರ್ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದಾರೆ.
ಮೇ 2023 ರಲ್ಲಿ ರಿಷ್ಯಂತ್ ಅವರು ದ.ಕ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಮಂಡ್ಯ ಎಸ್ಪಿ ಯತೀಶ್ ಅವರು ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.