ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿರುವ ಘಟನೆ ಪ್ರಿಯಕರ ದಿಲೀಪ್ ಹೆಗ್ಡೆ ಮತ್ತು ಪ್ರತಿಮಾ, ಗಂಡ ಬಾಲಕೃಷ್ಣನಿಗೆ ಸ್ಲೋ ಪಾಯಿಸನ್ ನೀಡಿ ಉಸಿರುಗಟ್ಟಿಸಿ ಸಾಯಿಸಿದ್ದಾರೆ. ಇನ್ನು ಸಾಯಿಸುವ ಮೊದಲು ಪ್ರತಿಮಾ, ಪತಿಯ ಜೊತೆ ಹಲವಾರು ರೀಲ್ಸ್ ಮಾಡಿದ್ದಾಳೆ. ಅದರಲ್ಲೂ ಕರಿಮಣಿ ಮಾಲೀಕ ನೀನಲ್ಲ ಎಂಬ ರೀಲ್ಸ್ ಸಹ ಮಾಡಿದ್ದಾರೆ.
ಉಡುಪಿ, (ಅಕ್ಟೋಬರ್ 25): ಉಡುಪಿ ಜಿಲ್ಲೆ, ಕಾರ್ಕಳ ತಾಲೂಕು ಅಜೆಕಾರಿನಲ್ಲಿ ನಡೆದ ಘಟನೆ ಎಲ್ಲರನ್ನ ತಲ್ಲಣಿಸಿಬಿಟ್ಟಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವಕ ದಿಲೀಪ್ ಹೆಗ್ಡೆ ಲವ್ನಲ್ಲಿ ಬಿದ್ದಿದ್ದ ಪ್ರತಿಮಾ, ಗಂಡ ಬಾಲಕೃಷ್ಣನಿಗೆ ಸ್ಲೋ ಪಾಯಿಸನ್ ನೀಡಿ ಉಸಿರುಗಟ್ಟಿಸಿ ಸಾಯಿಸಿದ್ದಾರೆ. ನರಳಿ ನರಳಿ ಸಾಯಲಿ ಎಂದು ಗೊತ್ತಾಗದ ಹಾಗೇ ಊಟದಲ್ಲಿ ವಿಷ ಹಾಕಿ ಕೊನೆಗೆ ಇಬ್ಬರು ಸೇರಿ ಉಸಿರುಗಟ್ಟಿಸಿ ಕೊಂದಿದ್ದಾರೆ. ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ಚಿಕಿತ್ಸೆ ಮುಗಿಸಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಅದೇ ರಾತ್ರಿ ಬಾಲಕೃಷ್ಣ ಪೂಜಾರಿ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರೆಲ್ಲ ಅಂತ್ಯಸಂಸ್ಕಾರವನ್ನು ಮುಗಿಸಿದ್ದಾರೆ. ಇದಾಗಿ ಮರಣೋತ್ತರ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದ್ದ ದಿನ ತನ್ನ ಸಹೋದರನ ಬಳಿ ಪ್ರತಿಮಾ ನಡೆದ ಘಟನೆಯನ್ನು ಬಿಚ್ಚಿಟ್ಟಿದ್ದಾಳೆ.